ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…