ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…