ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…