ಮಂಗಳೂರು : ಜುಲೈ 30 ಹಾಗೂ 31 ರವರೆಗೆ ದ.ಕ. ಜಿಲ್ಲೆಯ ಮಂಗಳೂರು ಕಮೀಷನರೇಟ್ ಘಟಕದ ವ್ಯಾಪ್ತಿಯ ಪರೀಕ್ಷಾ ಕೇಂದ್ರ ಸಿಇಟಿ 2020 – ಸಾಮಾನ್ಯ ಪ್ರವೇಶ ಪರೀಕ್ಷೆಗಳು ಹಾಗೂ ಆಗಸ್ಟ್ 1 ರಂದು ಹೊರನಾಡು ಮತ್ತು ಗಡಿನಾಡು ಆಭ್ಯರ್ಥಿಗಳಿಗೆ ಸಿಇಟಿ 2020ರ ಕನ್ನಡ ಭಾಷಾ ಪರೀಕ್ಷಾ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ಕಾಯ್ದೆಯ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜ್ಯಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿರುತ್ತಾರೆ.
ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಆಭ್ಯರ್ಥಿಗಳ ಹೊರತು ಪಡಿಸಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…