ಜುಲೈ 6 : ಯುವಜನ ಸಂಯುಕ್ತ ಮಂಡಳಿ ಮಹಾಸಭೆ ಮತ್ತು ಸನ್ಮಾನ

June 27, 2019
10:00 AM

ಸುಳ್ಯ: ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಜುಲೈ 6ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಲಿದೆ ಎಂದು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸುಬ್ರಮಣಿ ಕಲ್ಲುಗುಂಡಿ ಅವರನ್ನು ಸನ್ಮಾನಿಸಲಾಗುವುದು. ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ ಸನ್ಮಾನ ನೆರವೇರಿಸುವರು, ಸುಳ್ಯ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಮುಖ್ಯ ಅತಿಥಿಯಾಗಲಿದ್ದರೆ ಎಂದು ಅವರು ವಿವರಿಸಿದರು‌.
ಮಂಡಳಿಯ ಗೌರವಾಧ್ಯಕ್ಷ ಚಂದ್ರಶೇಖರ ಪನ್ನೆ, ಗೌರವ ಸಲಹೆಗಾರರಾದ, ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು, ದೀಪಕ್ ಕುತ್ತಮೊಟ್ಟೆ, ಲಕ್ಷ್ಮೀನಾರಾಯಣ ಕಜೆಗದ್ದೆ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಜಯನಗರ, ಕೋಶಾಧಿಕಾರಿ ತೇಜಸ್ವಿ ಕಡಪಳ, ಜತೆ ಕಾರ್ಯದರ್ಶಿಗಳಾದ ವಿಜಯ ಕುಮಾರ್ ಉಬರಡ್ಕ, ಶಂಕರ ಪೆರಾಜೆ, ನಿರ್ದೇಶಕರುಗಳಾದ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ಚರಣ್ ಕಾಯರ, ವಿಖ್ಯಾತ್ ಬಾರ್ಪಣೆ, ಪವನ್ ಜಿ.ಟಿ. ಪಲ್ಲತಡ್ಕ,  ರಶ್ಮಿ ರಜನಿಕಾಂತ್, ಶ್ರೀಮತಿ ರಾಜೀವಿ ಲಾವಂತಡ್ಕ, ಪೂರ್ವಾಧ್ಯಕ್ಷರಾದ ಪಿ.ಎಸ್.ಗಂಗಾಧರ್, ಕೆ.ಆರ್. ಪದ್ಮನಾಭ, ಹರೀಶ್ ಪೂಜಾರಿಮನೆ, ರಂಜಿತ್ ಕುಕ್ಕೆಟ್ಟಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror