ಮಂಗಳೂರು: ಜುಲೈ 11 ರಂದು ಕ್ಯಾಂಪ್ಕೋ ಸಂಸ್ಥೆಯು ಯಶಸ್ವಿ 46 ವರ್ಷಗಳ ಸೇವೆಯನ್ನು ಪೂರೈಸಿ 47 ನೇ ವರ್ಷಕ್ಕೆ ಕಾಲಿಡುತ್ತಿದೆ.
ಅಡಿಕೆ ಕೃಷಿಕರ ಕಣ್ಮಣಿ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೊ ಅಡಿಕೆ ಮಾರುಕಟ್ಟೆಯು ದಾರುಣ ಸ್ಥಿತಿಯಲ್ಲಿದ್ದಾಗ ಕೃಷಿಕರ ಉದ್ಧಾರಕ್ಕಾಗಿ ವಾರಣಾಶಿ ಸುಬ್ರಾಯ ಭಟ್ಟರ ಸಂಘಟನಾ ಚಾತುರ್ಯ ಮತ್ತು ದೂರದರ್ಶಿತ್ವದ ಫಲವಾಗಿ ಕೃಷಿಕ ಸಮುದಾಯದ ಸಹಕಾರದೊಂದಿಗೆ ಆಪದ್ಬಾಂಧವನಾಗಿ ಜನ್ಮ ತಾಳಿದ ಸಂಸ್ಥೆಯು ಕ್ರಮೇಣ ಕೊಕ್ಕೋ, ರಬ್ಬರ್ ಮತ್ತು ಕಾಳುಮೆಣಸುಗಳನ್ನು ವ್ಯಾಪಿಸಿಕೊಂಡು ಇದೀಗ 2018-19ನೇ ಹಣಕಾಸು ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 1880 ಕೋಟಿ ರೂಪಾಯಿಗಳ ವ್ಯವಹಾರವನ್ನು ದಾಖಲಿಸಿದೆ.
ಸಂಸ್ಥೆಯು ಜುಲೈ 11ನೇ ತಾರೀಕಿನಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಹಿರಿಯ ಸಹಕಾರಿ ಮತ್ತು ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೊದ ಪ್ರಥಮ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಜಿ.ಕೆ.ಸಂಗಮೇಶ್ವರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ವಿ.ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…