ಮಂಗಳೂರು: ಜುಲೈ 11 ರಂದು ಕ್ಯಾಂಪ್ಕೋ ಸಂಸ್ಥೆಯು ಯಶಸ್ವಿ 46 ವರ್ಷಗಳ ಸೇವೆಯನ್ನು ಪೂರೈಸಿ 47 ನೇ ವರ್ಷಕ್ಕೆ ಕಾಲಿಡುತ್ತಿದೆ.
ಅಡಿಕೆ ಕೃಷಿಕರ ಕಣ್ಮಣಿ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೊ ಅಡಿಕೆ ಮಾರುಕಟ್ಟೆಯು ದಾರುಣ ಸ್ಥಿತಿಯಲ್ಲಿದ್ದಾಗ ಕೃಷಿಕರ ಉದ್ಧಾರಕ್ಕಾಗಿ ವಾರಣಾಶಿ ಸುಬ್ರಾಯ ಭಟ್ಟರ ಸಂಘಟನಾ ಚಾತುರ್ಯ ಮತ್ತು ದೂರದರ್ಶಿತ್ವದ ಫಲವಾಗಿ ಕೃಷಿಕ ಸಮುದಾಯದ ಸಹಕಾರದೊಂದಿಗೆ ಆಪದ್ಬಾಂಧವನಾಗಿ ಜನ್ಮ ತಾಳಿದ ಸಂಸ್ಥೆಯು ಕ್ರಮೇಣ ಕೊಕ್ಕೋ, ರಬ್ಬರ್ ಮತ್ತು ಕಾಳುಮೆಣಸುಗಳನ್ನು ವ್ಯಾಪಿಸಿಕೊಂಡು ಇದೀಗ 2018-19ನೇ ಹಣಕಾಸು ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 1880 ಕೋಟಿ ರೂಪಾಯಿಗಳ ವ್ಯವಹಾರವನ್ನು ದಾಖಲಿಸಿದೆ.
ಸಂಸ್ಥೆಯು ಜುಲೈ 11ನೇ ತಾರೀಕಿನಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಹಿರಿಯ ಸಹಕಾರಿ ಮತ್ತು ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೊದ ಪ್ರಥಮ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಜಿ.ಕೆ.ಸಂಗಮೇಶ್ವರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ವಿ.ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…