Advertisement
ಸುದ್ದಿಗಳು

ಜು.11 : ‘ಕ್ಯಾಂಪ್ಕೊ ದಿನ’

Share

ಮಂಗಳೂರು: ಜುಲೈ 11 ರಂದು ಕ್ಯಾಂಪ್ಕೋ ಸಂಸ್ಥೆಯು  ಯಶಸ್ವಿ 46 ವರ್ಷಗಳ ಸೇವೆಯನ್ನು ಪೂರೈಸಿ 47 ನೇ ವರ್ಷಕ್ಕೆ  ಕಾಲಿಡುತ್ತಿದೆ.

ಅಡಿಕೆ ಕೃಷಿಕರ ಕಣ್ಮಣಿ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೊ ಅಡಿಕೆ ಮಾರುಕಟ್ಟೆಯು ದಾರುಣ ಸ್ಥಿತಿಯಲ್ಲಿದ್ದಾಗ ಕೃಷಿಕರ ಉದ್ಧಾರಕ್ಕಾಗಿ ವಾರಣಾಶಿ ಸುಬ್ರಾಯ ಭಟ್ಟರ ಸಂಘಟನಾ ಚಾತುರ್ಯ ಮತ್ತು ದೂರದರ್ಶಿತ್ವದ ಫಲವಾಗಿ ಕೃಷಿಕ ಸಮುದಾಯದ ಸಹಕಾರದೊಂದಿಗೆ ಆಪದ್ಬಾಂಧವನಾಗಿ ಜನ್ಮ ತಾಳಿದ ಸಂಸ್ಥೆಯು ಕ್ರಮೇಣ ಕೊಕ್ಕೋ, ರಬ್ಬರ್ ಮತ್ತು ಕಾಳುಮೆಣಸುಗಳನ್ನು ವ್ಯಾಪಿಸಿಕೊಂಡು ಇದೀಗ 2018-19ನೇ ಹಣಕಾಸು ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 1880 ಕೋಟಿ ರೂಪಾಯಿಗಳ ವ್ಯವಹಾರವನ್ನು ದಾಖಲಿಸಿದೆ.

ಸಂಸ್ಥೆಯು  ಜುಲೈ 11ನೇ ತಾರೀಕಿನಂದು  ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಹಿರಿಯ ಸಹಕಾರಿ ಮತ್ತು ಸಾಹಿತಿ  ಏರ್ಯ ಲಕ್ಷ್ಮೀನಾರಾಯಣ ಆಳ್ವ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ  ಎಸ್.ಆರ್.ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೊದ ಪ್ರಥಮ ವ್ಯವಸ್ಥಾಪಕ ನಿರ್ದೇಶಕರಾಗಿದ್ದ  ಜಿ.ಕೆ.ಸಂಗಮೇಶ್ವರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ವಿ.ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago