ಪಂಜ : ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…