ನಮ್ಮೂರ ಸುದ್ದಿ

ಜು.16: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಇದರ ವತಿಯಿಂದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.16 ರಂದು ಸುಳ್ಯ ಜ್ಯೋತಿ ಸರ್ಕಲ್ ಬಳಿಯ ಅಮೃತಭವನದಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ತಿಳಿಸಿದ್ದಾರೆ.

Advertisement
Advertisement

ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮ ಉದ್ಘಾಟಿಸುವರು. ಮಡಿಕೇರಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶರೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ಅಶ್ರಪ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞ ಅಹಮ್ಮದ್, ಸುಳ್ಯ ವೃತ್ತನಿರೀಕ್ಷ ಸತೀಶ್ ಕುಮಾರ್,  ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಪ್ರೆಸ್‍ಕ್ಲಬ್ ಅಧ್ಯಕ್ಷ ಜೆ.ಕೆ ರೈ ಭಾಗವಹಿಸಲಿರುವರು. ಸುದ್ದಿ ಸಮೂಹ ಸಂಸ್ಥೆಗಳ ಸಂಪಾದಕ ಡಾ.ಯು.ಪಿ ಶಿವಾನಂದ  ಸನ್ಮಾನ ನೆರವೇರಿಸುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡುವರು ಎಂದು ಅವರು ತಿಳಿಸಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಹಿಮಕರ ಕೆ,ಎಸ್, ರೆಡ್‍ಕ್ರಾಸ್ ಪುರಸ್ಕೃತ  ಪಿ.ಬಿ ಸುಧಾಕರ ರೈ, ಪತ್ರಕರ್ತ ರವಿರಾಜ ವಳಲಂಬೆ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ ಹಾಗೂ ನಿರಂತರ ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸುತ್ತಿರುವ ಶ್ರೀ ಮಹಾತ್ಮಗಾಂಧಿ ಸೇವಾ ಸಂಘ ಮಡಪ್ಪಾಡಿ ತಂಡವನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

3 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

4 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

4 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

13 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

15 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

17 hours ago