Advertisement
ನಮ್ಮೂರ ಸುದ್ದಿ

ಜು.16: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Share

ಸುಬ್ರಹ್ಮಣ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಇದರ ವತಿಯಿಂದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.16 ರಂದು ಸುಳ್ಯ ಜ್ಯೋತಿ ಸರ್ಕಲ್ ಬಳಿಯ ಅಮೃತಭವನದಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ತಿಳಿಸಿದ್ದಾರೆ.

ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮ ಉದ್ಘಾಟಿಸುವರು. ಮಡಿಕೇರಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶರೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ಅಶ್ರಪ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞ ಅಹಮ್ಮದ್, ಸುಳ್ಯ ವೃತ್ತನಿರೀಕ್ಷ ಸತೀಶ್ ಕುಮಾರ್,  ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಪ್ರೆಸ್‍ಕ್ಲಬ್ ಅಧ್ಯಕ್ಷ ಜೆ.ಕೆ ರೈ ಭಾಗವಹಿಸಲಿರುವರು. ಸುದ್ದಿ ಸಮೂಹ ಸಂಸ್ಥೆಗಳ ಸಂಪಾದಕ ಡಾ.ಯು.ಪಿ ಶಿವಾನಂದ  ಸನ್ಮಾನ ನೆರವೇರಿಸುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡುವರು ಎಂದು ಅವರು ತಿಳಿಸಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಹಿಮಕರ ಕೆ,ಎಸ್, ರೆಡ್‍ಕ್ರಾಸ್ ಪುರಸ್ಕೃತ  ಪಿ.ಬಿ ಸುಧಾಕರ ರೈ, ಪತ್ರಕರ್ತ ರವಿರಾಜ ವಳಲಂಬೆ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ ಹಾಗೂ ನಿರಂತರ ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸುತ್ತಿರುವ ಶ್ರೀ ಮಹಾತ್ಮಗಾಂಧಿ ಸೇವಾ ಸಂಘ ಮಡಪ್ಪಾಡಿ ತಂಡವನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

1 hour ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

5 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

6 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

15 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

15 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago