Advertisement
ನಮ್ಮೂರ ಸುದ್ದಿ

ಜು.16: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Share

ಸುಬ್ರಹ್ಮಣ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಇದರ ವತಿಯಿಂದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.16 ರಂದು ಸುಳ್ಯ ಜ್ಯೋತಿ ಸರ್ಕಲ್ ಬಳಿಯ ಅಮೃತಭವನದಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ತಿಳಿಸಿದ್ದಾರೆ.

Advertisement

ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮ ಉದ್ಘಾಟಿಸುವರು. ಮಡಿಕೇರಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶರೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ಅಶ್ರಪ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞ ಅಹಮ್ಮದ್, ಸುಳ್ಯ ವೃತ್ತನಿರೀಕ್ಷ ಸತೀಶ್ ಕುಮಾರ್,  ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಪ್ರೆಸ್‍ಕ್ಲಬ್ ಅಧ್ಯಕ್ಷ ಜೆ.ಕೆ ರೈ ಭಾಗವಹಿಸಲಿರುವರು. ಸುದ್ದಿ ಸಮೂಹ ಸಂಸ್ಥೆಗಳ ಸಂಪಾದಕ ಡಾ.ಯು.ಪಿ ಶಿವಾನಂದ  ಸನ್ಮಾನ ನೆರವೇರಿಸುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡುವರು ಎಂದು ಅವರು ತಿಳಿಸಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಹಿಮಕರ ಕೆ,ಎಸ್, ರೆಡ್‍ಕ್ರಾಸ್ ಪುರಸ್ಕೃತ  ಪಿ.ಬಿ ಸುಧಾಕರ ರೈ, ಪತ್ರಕರ್ತ ರವಿರಾಜ ವಳಲಂಬೆ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ ಹಾಗೂ ನಿರಂತರ ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸುತ್ತಿರುವ ಶ್ರೀ ಮಹಾತ್ಮಗಾಂಧಿ ಸೇವಾ ಸಂಘ ಮಡಪ್ಪಾಡಿ ತಂಡವನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

9 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

10 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

10 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

10 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago