Advertisement
ನಮ್ಮೂರ ಸುದ್ದಿ

ಜು.16: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Share

ಸುಬ್ರಹ್ಮಣ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಇದರ ವತಿಯಿಂದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.16 ರಂದು ಸುಳ್ಯ ಜ್ಯೋತಿ ಸರ್ಕಲ್ ಬಳಿಯ ಅಮೃತಭವನದಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ತಿಳಿಸಿದ್ದಾರೆ.

ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮ ಉದ್ಘಾಟಿಸುವರು. ಮಡಿಕೇರಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶರೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ಅಶ್ರಪ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞ ಅಹಮ್ಮದ್, ಸುಳ್ಯ ವೃತ್ತನಿರೀಕ್ಷ ಸತೀಶ್ ಕುಮಾರ್,  ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಪ್ರೆಸ್‍ಕ್ಲಬ್ ಅಧ್ಯಕ್ಷ ಜೆ.ಕೆ ರೈ ಭಾಗವಹಿಸಲಿರುವರು. ಸುದ್ದಿ ಸಮೂಹ ಸಂಸ್ಥೆಗಳ ಸಂಪಾದಕ ಡಾ.ಯು.ಪಿ ಶಿವಾನಂದ  ಸನ್ಮಾನ ನೆರವೇರಿಸುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡುವರು ಎಂದು ಅವರು ತಿಳಿಸಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಹಿಮಕರ ಕೆ,ಎಸ್, ರೆಡ್‍ಕ್ರಾಸ್ ಪುರಸ್ಕೃತ  ಪಿ.ಬಿ ಸುಧಾಕರ ರೈ, ಪತ್ರಕರ್ತ ರವಿರಾಜ ವಳಲಂಬೆ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ ಹಾಗೂ ನಿರಂತರ ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸುತ್ತಿರುವ ಶ್ರೀ ಮಹಾತ್ಮಗಾಂಧಿ ಸೇವಾ ಸಂಘ ಮಡಪ್ಪಾಡಿ ತಂಡವನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

4 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

16 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

17 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago