Advertisement
ರಾಜ್ಯ

ಜು.16 ರಿಂದ ರಾಘವೇಶ್ವರ ಶ್ರೀಗಳ ರಾಮಾಯಣ ಚಾತುರ್ಮಾಸ್ಯ ಆರಂಭ

Share

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠಾಧೀಶ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ ಬೆಂಗಳೂರಿನ ಗಿರಿನಗರದಲ್ಲಿರುವ ರಾಮಾಶ್ರಮ ಆವರಣದಲ್ಲಿ ಜು.16 ರಿಂದ  ನಡೆಯಲಿದೆ.

ಚಾತುರ್ಮಾಸ್ಯ ಅಂಗವಾಗಿ ಸೋಮವಾರ ಮಧ್ಯಾಹ್ನ ಪುರಪ್ರವೇಶ ಅದ್ದೂರಿಯಿಂದ ನೆರವೇರಿತು. ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಭಟ್ ಬೇರ್ಕಡವು, ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್ ಹೆಗಡೆ ಕೋರಮಂಗಲ, ಕಾರ್ಯದರ್ಶಿ ವಾದಿರಾಜ ಸಾಮಗ, ರಾಮಾಯಣ ಕ್ರಿಯಾಸಮಿತಿ ಅಧ್ಯಕ್ಷ ಶಾರದಾ ಜಯಗೋವಿಂದ್, ಕೆಕ್ಕಾರ್ ರಾಮಚಂದ್ರ ಭಟ್ ಹಾಗೂ ಶ್ರೀಮಠದ ಅಪಾರ ಶಿಷ್ಯ ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದು ಪುರಪ್ರವೇಶ ಮಾಡಿದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರಮಾಡಿಕೊಂಡರು.

Advertisement

 

Advertisement

 

ಮಂಗಳವಾರ ಚಾತುರ್ಮಾಸ್ಯ ವ್ರತಾರಂಭದ ಅಂಗವಾಗಿ ಬೆಳಿಗ್ಗೆ ಶ್ರೀಕರಾರ್ಚಿತ ಪೂಜೆಯ ಬಳಿಕ ಶ್ರೀವ್ಯಾಸಪೂಜೆ ಮತ್ತು ಗುರುಪರಂಪರೆಯ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಅನ್ನರಾಶಿ ಪೂಜೆ, ಪುನರ್ವಸು ಲೋಕಾರ್ಪಣೆ, ಮಧ್ಯಾಹ್ನ 2ಕ್ಕೆ ಚಾತುರ್ಮಾಸ್ಯ ಸಭೆ ಮತ್ತು ನೂತನ ಶಾಸನತಂತ್ರದ ಘೋಷಣೆ ನಡೆಯಲಿದೆ.

Advertisement

ಜುಲೈ 16ರಂದು ಆರಂಭವಾಗುವ ಚಾತುರ್ಮಾಸ ಸೆಪ್ಟೆಂಬರ್ 14ರಂದು ಸಂಪನ್ನವಾಗಲಿದ್ದು, ಈ ಬಾರಿಯ ಚಾತುರ್ಮಾಸಕ್ಕೆ ರಾಮಾಯಣ ಚಾತುರ್ಮಾಸ ಎಂದು ಹೆಸರಿಸಲಾಗಿದೆ. ಸೆಪ್ಟೆಂಬರ್ 14 ರಂದು ಶನಿವಾರ ಸೀಮೋಲ್ಲಂಘನ ನಡೆಯಲಿದೆ ಎಂದು ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್ ಕೋರಮಂಗಲ ಮತ್ತು ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಾತುರ್ಮಾಸ್ಯದಲ್ಲಿ ಜುಲೈ 16ರಂದು ಪುನರ್ವಸು ಭವನ ಲೋಕಾರ್ಪಣೆ, 19ರಂದು ಶ್ರೀಗಳ ವರ್ಧಂತಿ, 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆಪ್ಟೆಂಬರ್ 2ರಂದು ಗಣೇಶ ಚತುರ್ಥಿ ನಡೆಯಲಿದೆ. 14ರಂದು ಸೀಮೋಲ್ಲಂಘನೆಯ ದಿನ ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.  ಶ್ರೀಗಳು ಸನ್ಯಾಸ ಸ್ವೀಕರಿಸಿ 25 ವರ್ಷಗಳನ್ನು ಪೂರೈಸಿದ್ದು, ಈ ಬಾರಿ 26ನೇ ವರ್ಷದ ಚಾತುರ್ಮಾಸವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಪ್ರತಿ ದಿನ ಶ್ರೀಗಳಿಂದ ಧಾರಾ ರಾಮಾಯಣ ಪ್ರವಚನ ಇರುತ್ತದೆ ಎಂದು ಮಾಧ್ಯಮ  ಶ್ರೀಸಂಯೋಜಕ ಉದಯಶಂಕರ್ ಭಟ್ ತಿಳಿಸಿದ್ದಾರೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

3 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

12 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

12 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

14 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

14 hours ago