ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ವರ್ಧಂತ್ಯುತ್ಸವ ಜು.19 ರಂದು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನಡೆಯಲಿದೆ.
ಶ್ರೀಮಠದ ಶಿಷ್ಯಭಕ್ತರು ಶ್ರೀಸಂಸ್ಥಾನಕ್ಕೆ ಸಮರ್ಪಿಸಿರುವ ನೂತನ ರಜತಪೀಠಾರೋಹಣ ಇದೇ ಸಂದರ್ಭದಲ್ಲಿ ನಡೆಯಲಿದೆ. ಶ್ರೀಗಳು ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿದ್ದು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಾಧನೆಗಾಗಿ ಪ್ರತಿದಿನ ಧಾರಾ ರಾಮಾಯಣ ಪ್ರವಚನ ನಡೆಯುತ್ತಿದೆ.
ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, 108 ಕುಂಭಗಳ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ, ಮಧ್ಯಾಹ್ನ ಶ್ರೀಗಳಿಗೆ ತುಲಾಭಾರ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಧರ್ಮ ಕರ್ಮ ವಿಭಾಗದ ಶ್ರೀಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…