ಸಾಹಿತ್ಯ

ಜು.25: ಪುಂಸ್ತ್ರೀ ಬಗ್ಗೆ ರಾಜ್ಯ ಮಟ್ಟದ ವಿಚಾರ ಸಂಕಿರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕದ ಹಿರಿಯ ವಿದ್ವಾಂಸ ಡಾ. ಬಿ. ಪ್ರಭಾಕರ ಶಿಶಿಲರ ಮಹಾಕಾದಂಬರಿ, ಹದಿನಾಲ್ಕು ಭಾಷೆಗಳಿಗೆ ಅನುವಾದಗೊಳ್ಳುತ್ತಿರುವ ಪುಂಸ್ತ್ರೀ ಬಗ್ಗೆ ರಾಜ್ಯ ಮಟ್ಟದ ವಿಚಾರ ಸಂಕಿರಣವೊಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಜುಲೈ 25 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ರವರೆಗೆ ನಡೆಯಲಿದೆ.
ಶ್ರೀ ಧ. ಮ. ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಜಂಟಿಯಾಗಿ ನಡೆಸುವ ಈ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಉದ್ಘಾಟಿಸಲಿದ್ದಾರೆ. ಕಾಲೇಜು ಪ್ರಾಂಶುಪಾಲ ಪ್ರೊ. ಸತೀಶ್ಚಂದ್ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಧ.ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾದಂಬರಿಕಾರ ಡಾ. ಪ್ರಭಾಕರ ಶಿಶಿಲ ಉಪಸ್ಥಿತರಿರುತ್ತಾರೆ.
ಆ ಬಳಿಕ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಆರ್ಥಧಾರಿ ಜಬ್ಬಾರ್ ಸಮೋ ಪುಂಸ್ತ್ರೀಯ ಭೀಷ್ಮ ಮತ್ತು ಪರಶುರಾಮನ ಬಗ್ಗೆ, ನಿವೃತ್ತ ಉಪನ್ಯಾಸಕ ರಾಧಾಕೃಷ್ಣ ಕಲ್ಚಾರು ಪುಂಸ್ತ್ರೀಯ ಅಂಬೆ ಮತ್ತು ಸತ್ಯವತಿಯರ ಬಗ್ಗೆ ಹಾಗೂ ಹಿರಿಯ ಅರ್ಥಧಾರಿ ಗಣರಾಜ ಕುಂಬ್ಳೆ ಪುಂಸ್ತ್ರೀಯ ಸಾಲ್ವ, ಗಿರಿನಾಯಕ ಮತ್ತು ಪುರೋಹಿತ ಪಾತ್ರಗಳ ಬಗ್ಗೆ ಶಬ್ದ ಚಿತ್ರಣ ನೀಡಲಿದ್ದಾರೆ. ಉಪನ್ಯಾಸದ ಬಳಿಕ ಸಂವಾದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Advertisement
Advertisement

ಅಪರಾಹ್ನ 2.45 ರಿಂದ 4ರವರೆಗೆ ಕಾದಂಬರಿಕಾರ ಡಾ. ಪ್ರಭಾಕರ ಶಿಶಿಲರೊಡನೆ ಸಂವಾದ ಕಾರ್ಯಕ್ರಮ ನಡೆಯುತ್ತದೆ. ಇದರಲ್ಲಿ ಡಾ. ಎಸ್.ಡಿ. ಶೆಟ್ಟಿ, ಡಾ. ಟಿ. ಕೃಷ್ಣಮೂರ್ತಿ, ಡಾ. ಮಾಧವ ಭಟ್, ಸೀತಾರಾಮ ತೋಳ್ಪಾಡಿತ್ತಾಯ, ಡಾ. ಚೇತನ್ ಸೋಮೇಶ್ವರ, ರಾಮಕೃಷ್ಣ ಭಟ್, ಡಾ. ಸುಬ್ರಹ್ಮಣ್ಯ ಭಟ್, ಡಾ. ಧನೇಶ್ವರಿ, ಶೀಲಾವತಿ, ಬೆಳ್ತಂಗಡಿ ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಹಾಗೂ ಶ್ರೀ ಧ. ಮ. ಕಾಲೇಜು ಉಜಿರೆಯ ಐಚ್ಛಿಕ ಕನ್ನಡದ ವಿದ್ಯಾರ್ಥಿಗಳು ಮತ್ತು ಸಭಾಸದರು ಪಾಲ್ಗೊಳ್ಳುತ್ತಾರೆ. ಸಮನ್ವಯಕಾರರಾದ ಪ್ರಸಿದ್ಧ ಅರ್ಥಧಾರಿ ಉಜಿರೆ ಅಶೋಕ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

3 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

11 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

11 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

12 hours ago