Advertisement
ಸಾಹಿತ್ಯ

ಜು.25: ಪುಂಸ್ತ್ರೀ ಬಗ್ಗೆ ರಾಜ್ಯ ಮಟ್ಟದ ವಿಚಾರ ಸಂಕಿರಣ

Share

ಸುಳ್ಯ: ಕರ್ನಾಟಕದ ಹಿರಿಯ ವಿದ್ವಾಂಸ ಡಾ. ಬಿ. ಪ್ರಭಾಕರ ಶಿಶಿಲರ ಮಹಾಕಾದಂಬರಿ, ಹದಿನಾಲ್ಕು ಭಾಷೆಗಳಿಗೆ ಅನುವಾದಗೊಳ್ಳುತ್ತಿರುವ ಪುಂಸ್ತ್ರೀ ಬಗ್ಗೆ ರಾಜ್ಯ ಮಟ್ಟದ ವಿಚಾರ ಸಂಕಿರಣವೊಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಜುಲೈ 25 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ರವರೆಗೆ ನಡೆಯಲಿದೆ.
ಶ್ರೀ ಧ. ಮ. ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಜಂಟಿಯಾಗಿ ನಡೆಸುವ ಈ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಉದ್ಘಾಟಿಸಲಿದ್ದಾರೆ. ಕಾಲೇಜು ಪ್ರಾಂಶುಪಾಲ ಪ್ರೊ. ಸತೀಶ್ಚಂದ್ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಧ.ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾದಂಬರಿಕಾರ ಡಾ. ಪ್ರಭಾಕರ ಶಿಶಿಲ ಉಪಸ್ಥಿತರಿರುತ್ತಾರೆ.
ಆ ಬಳಿಕ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಆರ್ಥಧಾರಿ ಜಬ್ಬಾರ್ ಸಮೋ ಪುಂಸ್ತ್ರೀಯ ಭೀಷ್ಮ ಮತ್ತು ಪರಶುರಾಮನ ಬಗ್ಗೆ, ನಿವೃತ್ತ ಉಪನ್ಯಾಸಕ ರಾಧಾಕೃಷ್ಣ ಕಲ್ಚಾರು ಪುಂಸ್ತ್ರೀಯ ಅಂಬೆ ಮತ್ತು ಸತ್ಯವತಿಯರ ಬಗ್ಗೆ ಹಾಗೂ ಹಿರಿಯ ಅರ್ಥಧಾರಿ ಗಣರಾಜ ಕುಂಬ್ಳೆ ಪುಂಸ್ತ್ರೀಯ ಸಾಲ್ವ, ಗಿರಿನಾಯಕ ಮತ್ತು ಪುರೋಹಿತ ಪಾತ್ರಗಳ ಬಗ್ಗೆ ಶಬ್ದ ಚಿತ್ರಣ ನೀಡಲಿದ್ದಾರೆ. ಉಪನ್ಯಾಸದ ಬಳಿಕ ಸಂವಾದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಅಪರಾಹ್ನ 2.45 ರಿಂದ 4ರವರೆಗೆ ಕಾದಂಬರಿಕಾರ ಡಾ. ಪ್ರಭಾಕರ ಶಿಶಿಲರೊಡನೆ ಸಂವಾದ ಕಾರ್ಯಕ್ರಮ ನಡೆಯುತ್ತದೆ. ಇದರಲ್ಲಿ ಡಾ. ಎಸ್.ಡಿ. ಶೆಟ್ಟಿ, ಡಾ. ಟಿ. ಕೃಷ್ಣಮೂರ್ತಿ, ಡಾ. ಮಾಧವ ಭಟ್, ಸೀತಾರಾಮ ತೋಳ್ಪಾಡಿತ್ತಾಯ, ಡಾ. ಚೇತನ್ ಸೋಮೇಶ್ವರ, ರಾಮಕೃಷ್ಣ ಭಟ್, ಡಾ. ಸುಬ್ರಹ್ಮಣ್ಯ ಭಟ್, ಡಾ. ಧನೇಶ್ವರಿ, ಶೀಲಾವತಿ, ಬೆಳ್ತಂಗಡಿ ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಹಾಗೂ ಶ್ರೀ ಧ. ಮ. ಕಾಲೇಜು ಉಜಿರೆಯ ಐಚ್ಛಿಕ ಕನ್ನಡದ ವಿದ್ಯಾರ್ಥಿಗಳು ಮತ್ತು ಸಭಾಸದರು ಪಾಲ್ಗೊಳ್ಳುತ್ತಾರೆ. ಸಮನ್ವಯಕಾರರಾದ ಪ್ರಸಿದ್ಧ ಅರ್ಥಧಾರಿ ಉಜಿರೆ ಅಶೋಕ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

7 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

13 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

13 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

13 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

13 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

13 hours ago