ಜು.3: ಗೋರಕ್ಷಣೆ ಆಗ್ರಹಿಸಿ ಪ್ರತಿಭಟನೆ

July 2, 2019
9:59 PM

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು  ಬುಧವಾರ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಗೆ ಬೆಂಬಲ- ಅಂಗಾರ

ವಿಹಿಂಪ ಮತ್ತು ಭಜರಂಗ ದಳ ನಡೆಸುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗಿದೆ. ಇದು ಜಿಲ್ಲೆಯ ಶಾಂತಿ ಕದಡಲು ಕಾರಣವಾಗುತಿದೆ. ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಕಳ್ಳ ಸಾಗಾಟ ಮತ್ತು ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು. ಅಕ್ರಮ ಗೋ ಸಾಗಾಟ ತಡೆಯದೇ ಇದ್ದರೆ ಮುಂದೆ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಸರಕಾರವೇ ಹೊಣೆಯಾಗಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror