ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು ಬುಧವಾರ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಗೆ ಬೆಂಬಲ- ಅಂಗಾರ
ವಿಹಿಂಪ ಮತ್ತು ಭಜರಂಗ ದಳ ನಡೆಸುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗಿದೆ. ಇದು ಜಿಲ್ಲೆಯ ಶಾಂತಿ ಕದಡಲು ಕಾರಣವಾಗುತಿದೆ. ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಕಳ್ಳ ಸಾಗಾಟ ಮತ್ತು ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು. ಅಕ್ರಮ ಗೋ ಸಾಗಾಟ ತಡೆಯದೇ ಇದ್ದರೆ ಮುಂದೆ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಸರಕಾರವೇ ಹೊಣೆಯಾಗಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…