ಸುದ್ದಿಗಳು

ಜು.30 ರಿಂದ ಆನ್‌ಲೈನ್ ಮೂಲಕ 9 ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದು ಭಾರತ ಒಂದು ಸೂಕ್ಷ್ಮ ತಿರುವಿನಲ್ಲಿ ನಿಂತಿದೆ. ದೇಶದ ಮೇಲೆ ಅಂತರ-ಬಾಹ್ಯದಿಂದಲೂ ಸಂಕಟಗಳ ಮಾಲಿಕೆ ಪ್ರಾರಂಭವಾಗಿದೆ. ಇಂತಹ ಪರಿಸ್ಥಿತಿ ಸ್ವತಂತ್ರ ಭಾರತದಲ್ಲಿ ಎಂದಿಗೂ ಬಂದಿರಲಿಲ್ಲ.

Advertisement
Advertisement

ಒಂದೆಡೆ ದೇಶದಲ್ಲಿ ಕೊರೋನಾ ಪಿಡುಗು ತಾಂಡವವಾಡುತ್ತಿದೆ. ಈ ಪಿಡುಗನ್ನು ತಡೆಗಟ್ಟಲು ಭಾರತ ಸರಕಾರ ಇನ್ನಿಲ್ಲದ  ಪ್ರಯತ್ನ ಮಾಡುತ್ತಿದೆ. ಕಳೆದ 4 ತಿಂಗಳಿನಿಂದ ದೇಶದಲ್ಲಿ ಲಾಕ್‌ಡೌನ್ ಇದೆ.  ಎಲ್ಲ ವ್ಯವಸ್ಥೆಗಳು ಸಕ್ರಿಯವಿದ್ದರೂ ಅಪೇಕ್ಷಿತವಿರುವಂತೆ ಯಶಸ್ಸು ದೊರೆಯುತ್ತಿರುವಂತೆ ಕಾಣಿಸುತ್ತಿಲ್ಲ. ಈ ರೀತಿಯ ಆರೋಗ್ಯ ಸಮಸ್ಯೆಯು ದೇಶಾದ್ಯಂತ ಕೋಟ್ಯವಧಿ ಜನತೆಗೆ ಕೆಲಸವಿಲ್ಲದಂತೆ ಮಾಡಿರುವುದರಿಂದ  ಅರ್ಥವ್ಯವಸ್ಥೆ  ಹದಗೆಟ್ಟಿದೆ. ನಿರುದ್ಯೋಗ  ಸಮಸ್ಯೆ ಹೆಚ್ಚಳವಾಗಿದ್ದು,  ಅಭಿವೃದ್ಧಿಯ ವೇಗ ಸ್ಥಗಿತಗೊಂಡಿದೆ.  ಇಂತಹ ಪರಿಸ್ಥಿತಿಯಲ್ಲಿಯೇ ದೇಶದ ಮೇಲೆ ಬಾಹ್ಯ ಆಕ್ರಮಣಗಳು ಪ್ರಾರಂಭವಾಗಿವೆ. ಪಕ್ಕದ ರಾಷ್ಟ್ರ ಚೀನಾ ಭಾರತದ ವಿರುದ್ಧ  ಎದ್ದು ನಿಂತಿದೆ. ಗಲವಾನ್ ಕಣಿವೆಯಲ್ಲಿ ಚೀನಾದ ಸೈನಿಕರು ನುಸುಳಿ, ಭಾರತೀಯ ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರು. ಇದರಲ್ಲಿ  ಭಾರತದ 20 ಸೈನಿಕರು ಹುತಾತ್ಮರಾದರು; ಆದರೆ ಭಾರತೀಯ ಸೈನಿಕರು ಚೀನಾದ ಸೈನಿಕರನ್ನು ಕೊಂದು, ಅವರಿಗೆ ತಕ್ಕ ಪಾಠ ಕಲಿಸಿದರು. ಇದರಿಂದ ಚೀನಾದ ಅಹಂಕಾರಕ್ಕೆ ಪೆಟ್ಟು ಬಿದ್ದಿತು.

 ಈಗ ಭಾರತಕ್ಕೆ ಆಧ್ಯಾತ್ಮಿಕ ಸ್ತರದಲ್ಲಿ ಹಿಂದೂ ರಾಷ್ಟ್ರವೆಂದು  ಘೋಷಿಸದೇ ಪರ್ಯಾಯವಿಲ್ಲ. ಇದಕ್ಕಾಗಿ ಹಿಂದೂಗಳೇ ಸಂಘಟಿತರಾಗಿ ರಾಷ್ಟ್ರ ಮತ್ತು ಧರ್ಮದ ಉತ್ಥಾನಕ್ಕಾಗಿ ಕಾರ್ಯನಿರತರಾಗಬೇಕಾಗಿದೆ. ಮುಖ್ಯವಾಗಿ ಇದೇ ಕಾರಣಕ್ಕಾಗಿಯೇ ಹಿಂದೂ ಜನಜಾಗೃತಿ ಸಮಿತಿಯು ಕಳೆದ 8 ವರ್ಷಗಳಿಂದ ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ಅಧಿವೇಶನವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ.  ಈ ಬಾರಿ ಕೊರೊನಾ ಸೋಂಕು ಹರಡಿರುವುದರಿಂದ  ಜುಲೈ 30 ರಿಂದ ಪ್ರಾರಂಭವಾಗುವ ಈ ಅಧಿವೇಶನ ಆನ್‌ಲೈನ್ ಇರಲಿದೆ. ಈ ನಿಮಿತ್ತದಿಂದ ದೇಶ-ವಿದೇಶದ ಹಿಂದುತ್ವನಿಷ್ಠರು  ನಿವಾಸದಲ್ಲಿದ್ದುಕೊಂಡೇ ಈ ಅಧಿವೇಶನದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಲಿದ್ದಾರೆ. ಹಾಗೆಯೇ ಒಂದೇ ಸಮಯದಲ್ಲಿ ಸಾವಿರಾರು ಹಿಂದುತ್ವನಿಷ್ಠರು, ರಾಷ್ಟ್ರಾಭಿಮಾನಿಗಳು, ಧರ್ಮಾಭಿಮಾನಿಗಳು, ಜಿಜ್ಞಾಸುಗಳು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.  ಅಧಿವೇಶನವು  ಜುಲೈ 30 ರಿಂದ 2 ಆಗಸ್ಟ್ ಹಾಗೂ 6 ರಿಂದ 9 ಆಗಸ್ಟ್  ವರೆಗೆ ಜರುಗಲಿದೆ.

ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಫೇಸಬುಕ್ ಪೇಜ್ ಮತ್ತು ‘ಯು-ಟ್ಯೂಬ್ ಚಾನಲ್ ಮೇಲೆ ನೋಡಬಹುದಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ  ರಮೇಶ ಶಿಂದೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

9 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

11 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

13 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

14 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

14 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

2 days ago