Advertisement
ಸುದ್ದಿಗಳು

ಜು.30 ರಿಂದ ಆನ್‌ಲೈನ್ ಮೂಲಕ 9 ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Share

ಇಂದು ಭಾರತ ಒಂದು ಸೂಕ್ಷ್ಮ ತಿರುವಿನಲ್ಲಿ ನಿಂತಿದೆ. ದೇಶದ ಮೇಲೆ ಅಂತರ-ಬಾಹ್ಯದಿಂದಲೂ ಸಂಕಟಗಳ ಮಾಲಿಕೆ ಪ್ರಾರಂಭವಾಗಿದೆ. ಇಂತಹ ಪರಿಸ್ಥಿತಿ ಸ್ವತಂತ್ರ ಭಾರತದಲ್ಲಿ ಎಂದಿಗೂ ಬಂದಿರಲಿಲ್ಲ.

ಒಂದೆಡೆ ದೇಶದಲ್ಲಿ ಕೊರೋನಾ ಪಿಡುಗು ತಾಂಡವವಾಡುತ್ತಿದೆ. ಈ ಪಿಡುಗನ್ನು ತಡೆಗಟ್ಟಲು ಭಾರತ ಸರಕಾರ ಇನ್ನಿಲ್ಲದ  ಪ್ರಯತ್ನ ಮಾಡುತ್ತಿದೆ. ಕಳೆದ 4 ತಿಂಗಳಿನಿಂದ ದೇಶದಲ್ಲಿ ಲಾಕ್‌ಡೌನ್ ಇದೆ.  ಎಲ್ಲ ವ್ಯವಸ್ಥೆಗಳು ಸಕ್ರಿಯವಿದ್ದರೂ ಅಪೇಕ್ಷಿತವಿರುವಂತೆ ಯಶಸ್ಸು ದೊರೆಯುತ್ತಿರುವಂತೆ ಕಾಣಿಸುತ್ತಿಲ್ಲ. ಈ ರೀತಿಯ ಆರೋಗ್ಯ ಸಮಸ್ಯೆಯು ದೇಶಾದ್ಯಂತ ಕೋಟ್ಯವಧಿ ಜನತೆಗೆ ಕೆಲಸವಿಲ್ಲದಂತೆ ಮಾಡಿರುವುದರಿಂದ  ಅರ್ಥವ್ಯವಸ್ಥೆ  ಹದಗೆಟ್ಟಿದೆ. ನಿರುದ್ಯೋಗ  ಸಮಸ್ಯೆ ಹೆಚ್ಚಳವಾಗಿದ್ದು,  ಅಭಿವೃದ್ಧಿಯ ವೇಗ ಸ್ಥಗಿತಗೊಂಡಿದೆ.  ಇಂತಹ ಪರಿಸ್ಥಿತಿಯಲ್ಲಿಯೇ ದೇಶದ ಮೇಲೆ ಬಾಹ್ಯ ಆಕ್ರಮಣಗಳು ಪ್ರಾರಂಭವಾಗಿವೆ. ಪಕ್ಕದ ರಾಷ್ಟ್ರ ಚೀನಾ ಭಾರತದ ವಿರುದ್ಧ  ಎದ್ದು ನಿಂತಿದೆ. ಗಲವಾನ್ ಕಣಿವೆಯಲ್ಲಿ ಚೀನಾದ ಸೈನಿಕರು ನುಸುಳಿ, ಭಾರತೀಯ ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರು. ಇದರಲ್ಲಿ  ಭಾರತದ 20 ಸೈನಿಕರು ಹುತಾತ್ಮರಾದರು; ಆದರೆ ಭಾರತೀಯ ಸೈನಿಕರು ಚೀನಾದ ಸೈನಿಕರನ್ನು ಕೊಂದು, ಅವರಿಗೆ ತಕ್ಕ ಪಾಠ ಕಲಿಸಿದರು. ಇದರಿಂದ ಚೀನಾದ ಅಹಂಕಾರಕ್ಕೆ ಪೆಟ್ಟು ಬಿದ್ದಿತು.

 ಈಗ ಭಾರತಕ್ಕೆ ಆಧ್ಯಾತ್ಮಿಕ ಸ್ತರದಲ್ಲಿ ಹಿಂದೂ ರಾಷ್ಟ್ರವೆಂದು  ಘೋಷಿಸದೇ ಪರ್ಯಾಯವಿಲ್ಲ. ಇದಕ್ಕಾಗಿ ಹಿಂದೂಗಳೇ ಸಂಘಟಿತರಾಗಿ ರಾಷ್ಟ್ರ ಮತ್ತು ಧರ್ಮದ ಉತ್ಥಾನಕ್ಕಾಗಿ ಕಾರ್ಯನಿರತರಾಗಬೇಕಾಗಿದೆ. ಮುಖ್ಯವಾಗಿ ಇದೇ ಕಾರಣಕ್ಕಾಗಿಯೇ ಹಿಂದೂ ಜನಜಾಗೃತಿ ಸಮಿತಿಯು ಕಳೆದ 8 ವರ್ಷಗಳಿಂದ ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ಅಧಿವೇಶನವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ.  ಈ ಬಾರಿ ಕೊರೊನಾ ಸೋಂಕು ಹರಡಿರುವುದರಿಂದ  ಜುಲೈ 30 ರಿಂದ ಪ್ರಾರಂಭವಾಗುವ ಈ ಅಧಿವೇಶನ ಆನ್‌ಲೈನ್ ಇರಲಿದೆ. ಈ ನಿಮಿತ್ತದಿಂದ ದೇಶ-ವಿದೇಶದ ಹಿಂದುತ್ವನಿಷ್ಠರು  ನಿವಾಸದಲ್ಲಿದ್ದುಕೊಂಡೇ ಈ ಅಧಿವೇಶನದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಲಿದ್ದಾರೆ. ಹಾಗೆಯೇ ಒಂದೇ ಸಮಯದಲ್ಲಿ ಸಾವಿರಾರು ಹಿಂದುತ್ವನಿಷ್ಠರು, ರಾಷ್ಟ್ರಾಭಿಮಾನಿಗಳು, ಧರ್ಮಾಭಿಮಾನಿಗಳು, ಜಿಜ್ಞಾಸುಗಳು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.  ಅಧಿವೇಶನವು  ಜುಲೈ 30 ರಿಂದ 2 ಆಗಸ್ಟ್ ಹಾಗೂ 6 ರಿಂದ 9 ಆಗಸ್ಟ್  ವರೆಗೆ ಜರುಗಲಿದೆ.

ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಫೇಸಬುಕ್ ಪೇಜ್ ಮತ್ತು ‘ಯು-ಟ್ಯೂಬ್ ಚಾನಲ್ ಮೇಲೆ ನೋಡಬಹುದಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ  ರಮೇಶ ಶಿಂದೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

17 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

23 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

23 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago