Advertisement
ಧಾರ್ಮಿಕ

ಜು. 5 ರಿಂದ ರಾಘವೇಶ್ವರ ಶ್ರೀ ಚಾತುರ್ಮಾಸ್ಯ | ಭಕ್ತರ ಭೇಟಿಗೆ ಅವಕಾಶ ಇಲ್ಲ

Share

ಬೆಂಗಳೂರು:  ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27 ನೇ ಚಾತುರ್ಮಾಸ್ಯ ಜುಲೈ. 5 ರಿಂದ ಸೆಪ್ಟೆಂಬರ್ 2 ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ.

ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾ ಚಾತುರ್ಮಾಸ್ಯವಾಗಿ ಈ ಬಾರಿಯ ಚಾತುರ್ಮಾಸ್ಯವನ್ನು ಸರ್ಕಾರದ ನೀತಿ ನಿಯಮಗಳ ಚೌಕಟ್ಟಿನಲ್ಲಿ ಆಚರಿಸಲಾಗುತ್ತಿದೆ. ಸಮಗ್ರ ಭಾರತೀಯ ವಿದ್ಯೆಗಳ ಅಧ್ಯಯನದ ಸುಸ್ಥಾನವಾಗಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಹಾಗೂ ಅದಕ್ಕೆ ಪೀಠಿಕೆಯಾಗಿ ಮೂಡಿ ಬರುತ್ತಿರುವ ಅಪೂರ್ವ ಗುರುಕುಲಗಳ ಕಾರ್ಯ ಈ ಬಾರಿಯ ಚಾತುರ್ಮಾಸ್ಯದ ಜೀವನಾಡಿಯಾಗಲಿದೆ.

ಅಶೋಕಾವನದ ಶ್ರೀ ಮಲ್ಲಿಕಾರ್ಜುನದೇವರ ಸನ್ನಿಧಿಯಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪ್ರತಿದಿನ ಗಣಹೋಮ, ರಾಮತಾರಕ ಹವನ ಮತ್ತು ರುದ್ರಹವನ ನಡೆಯಲಿದೆ.

ಸುರಕ್ಷೆಗೆ ಕ್ರಮ: ಕೋವಿಡ್-19 ಸಾಂಕ್ರಾಮಿಕದಿಂದ ಇಡೀ ವಿಶ್ವ ತತ್ತರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಚಾತುರ್ಮಾಸ್ಯ ವ್ರತಾಚರಣೆಯನ್ನು ಭಿನ್ನವಾಗಿ ಆಯೋಜಿಸಲಾಗಿದ್ದು, ಗುರು- ಶಿಷ್ಯರ ಸುರಕ್ಷೆ ದೃಷ್ಟಿಯಿಂದ ಭಿಕ್ಷಾಸೇವೆ ಹಾಗೂ ಪಾದಪೂಜೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರ ಸೂಚಿಸಿದ ಎಲ್ಲ ನಿಯಮಗಳನ್ನು ಪಾಲಿಸಲಾಗುತ್ತದೆ.

ಚಾತುರ್ಮಾಸ್ಯ ವ್ರತಾರಂಭದ ದಿನ ನಡೆಯುವ ವ್ಯಾಸಪೂಜೆಗೆ ಸಮಿತಿಯಿಂದ ಅಧಿಕೃತ ಪತ್ರ ನೀಡಿದವರಿಗೆ ಮಾತ್ರ ಅವಕಾಶವಿದ್ದು, ಪಾದಪೂಜೆ ಸಾಮೂಹಿಕವಾಗಿ ನಡೆಯಲಿದೆ. ಶ್ರೀಸವಾರಿಯ ಸ್ಥಳಕ್ಕೆ ಯಾರಿಗೂ ಪ್ರವೇಶ ಇರುವುದಿಲ್ಲ. ವ್ಯಾಸಪೂಜೆ ಹಾಗೂ ದಿನನಿತ್ಯದ ಶ್ರೀಕರಾರ್ಚಿತ ಪೂಜೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲಾಗುವುದು.

ಯಾರಿಗೂ ಶ್ರೀಕರಗಳಿಂದ ತೀರ್ಥ, ಮಂತ್ರಾಕ್ಷತೆ ಇರುವುದಿಲ್ಲ. ವೈಯಕ್ತಿಕ ಭೇಟಿ ಹಾಗೂ ನಿವೇದನೆಗೆ ಅವಕಾಶವಿಲ್ಲ. ಭಕ್ತರು ಆನ್‍ಲೈನ್ ಸೇವೆಗಳನ್ನು ಮಾಡಿಸಲು ಅವಕಾಶವಿರುತ್ತದೆ ಎಂದು ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಮತ್ತು ಕಾರ್ಯದರ್ಶಿ ಪಿದಮಲೆ ನಾಗರಾಜ್ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ. ವಿವರಗಳಿಗೆ ಮೊಬೈಲ್: 9448007828 ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago