ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಜು.5 ರಂದು ಸಾಯಂಕಾಲ ‘ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ ಮಾರ್ಗದರ್ಶನವಿರಲಿದೆ. FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.
1. www.FB.com/HJSBengaluru
2. www.Youtube.com/HJSKarnataka
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…