ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಜು.5 ರಂದು ಸಾಯಂಕಾಲ ‘ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ ಮಾರ್ಗದರ್ಶನವಿರಲಿದೆ. FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.
1. www.FB.com/HJSBengaluru
2. www.Youtube.com/HJSKarnataka
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…