ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು ಜು. 18 ಕ್ಕೆ ಮುಂದೂಡಲಾಗಿದೆ.
ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ ಬದಲಾಯಿಸಿ ಸಭೆ ಮುಂದೂಡಲಾಗಿದೆ.
ಸಭೆ ಮುಂದೂಡಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…