ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು ಜು. 18 ಕ್ಕೆ ಮುಂದೂಡಲಾಗಿದೆ.
ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ ಬದಲಾಯಿಸಿ ಸಭೆ ಮುಂದೂಡಲಾಗಿದೆ.
ಸಭೆ ಮುಂದೂಡಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…