ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು ಜು. 18 ಕ್ಕೆ ಮುಂದೂಡಲಾಗಿದೆ.
ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ ಬದಲಾಯಿಸಿ ಸಭೆ ಮುಂದೂಡಲಾಗಿದೆ.
ಸಭೆ ಮುಂದೂಡಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…