ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು ಜು. 18 ಕ್ಕೆ ಮುಂದೂಡಲಾಗಿದೆ.
ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ ಬದಲಾಯಿಸಿ ಸಭೆ ಮುಂದೂಡಲಾಗಿದೆ.
ಸಭೆ ಮುಂದೂಡಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…