ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…