ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…