ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…