ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…