ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…