ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…