ನಮ್ಮೂರ ಸುದ್ದಿ

ಜೂ.1 ರಿಂದ ಅರಂತೋಡು-ತೊಡಿಕಾನ ಸಹಕಾರ ಸಂಘದ ಶತ ಸಂಭ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಜೂನ್ 1 ಹಾಗೂ 2 ರಂದು  ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ. 1 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶತಮಾನೋತ್ಸವದ ನೆನಪಿಗೆ ನಿರ್ಮಿಸಿದ ಸಹಕಾರ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಉದ್ಘಾಟಿಸುವರು. ಶಾಸಕ ಎಸ್‌.ಅಂಗಾರ ಅಧ್ಯಕ್ಷತೆ ವಹಿಸುವರು. ಕೃಷಿದರ್ಶಿನಿಯ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್, ಸಮಾರಂಭದ ಉದ್ಘಾಟನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆಯನ್ನು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ನೆರವೇರಿಸುವರು.

ಎ.ಓ.ಎಲ್.ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್, ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಅವರನ್ನು ಸನ್ಮಾನಿಸಲಾಗುವುದು. ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಕೊಡೆಂಕೇರಿ, ಸಹಕಾರ ಸಂಘಗಳ ಉಪನಿಬಂಧಕ ಡಾ.ಸುರೇಶ್ ಗೌಡ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ‘ಉದ್ಯಮ-ಸಣ್ಣ ಕೈಗಾರಿಕೆಗಳು ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರ‌ಮಗಳು ನಡೆಯಲಿದೆ. ಕೃಷಿ ವಸ್ತು ಪ್ರದರ್ಶನ ಕೃಷಿ ದರ್ಶಿನಿಯಲ್ಲಿ 50ಕ್ಕೂ ಮಿಕ್ಕಿ ಸ್ಟಾಲ್ ಗಳು ಇರಲಿದೆ.

ಜೂನ್ 2ರಂದು ಬೆಳಿಗ್ಗೆ ಒಂಭತ್ತರಿಂದ ಮಧ್ಯಾಹ್ನವರೆಗೆ ಜಾನುವಾರು ಜಾತ್ರೆ ನಡೆಯಲಿದೆ. ಪೂ.10ರಿಂದ ಕೃಷಿ ವಿಚಾರ ಸಂಕಿರಣ ನಡೆಯಲಿದ್ದು ‘ಹಳದಿ ರೋಗ ಪೀಡಿತ ಅಡಕೆ ಕೃಷಿಗೆ ಪರ್ಯಾಯವಾಗಿ ತಾಳೆ ಬೆಳೆ’ ಮತ್ತು ‘ಲಾಭದಾಯಕ ಕಾಳುಮೆಣಸು ಕೃಷಿ’ ಬಗ್ಗೆ ಗೋಷ್ಠಿಗಳು ನಡೆಯಲಿದೆ. ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೆಬ್ ಸೈಟ್ ಲೋಕಾರ್ಪಣೆ ಮಾಡುವರು. ಬಳಿಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂತೋಷ್ ಕುತ್ತಮೊಟ್ಟೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ವಾಸುದೇವ ನಾಯಕ್‌.ವಿ. ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

8 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

8 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

9 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

9 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

9 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago