Advertisement
ನಮ್ಮೂರ ಸುದ್ದಿ

ಜೂ.1 ರಿಂದ ಅರಂತೋಡು-ತೊಡಿಕಾನ ಸಹಕಾರ ಸಂಘದ ಶತ ಸಂಭ್ರಮ

Share

ಸುಳ್ಯ: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಜೂನ್ 1 ಹಾಗೂ 2 ರಂದು  ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ. 1 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶತಮಾನೋತ್ಸವದ ನೆನಪಿಗೆ ನಿರ್ಮಿಸಿದ ಸಹಕಾರ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಉದ್ಘಾಟಿಸುವರು. ಶಾಸಕ ಎಸ್‌.ಅಂಗಾರ ಅಧ್ಯಕ್ಷತೆ ವಹಿಸುವರು. ಕೃಷಿದರ್ಶಿನಿಯ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್, ಸಮಾರಂಭದ ಉದ್ಘಾಟನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆಯನ್ನು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ನೆರವೇರಿಸುವರು.

ಎ.ಓ.ಎಲ್.ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್, ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಅವರನ್ನು ಸನ್ಮಾನಿಸಲಾಗುವುದು. ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಕೊಡೆಂಕೇರಿ, ಸಹಕಾರ ಸಂಘಗಳ ಉಪನಿಬಂಧಕ ಡಾ.ಸುರೇಶ್ ಗೌಡ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ‘ಉದ್ಯಮ-ಸಣ್ಣ ಕೈಗಾರಿಕೆಗಳು ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರ‌ಮಗಳು ನಡೆಯಲಿದೆ. ಕೃಷಿ ವಸ್ತು ಪ್ರದರ್ಶನ ಕೃಷಿ ದರ್ಶಿನಿಯಲ್ಲಿ 50ಕ್ಕೂ ಮಿಕ್ಕಿ ಸ್ಟಾಲ್ ಗಳು ಇರಲಿದೆ.

ಜೂನ್ 2ರಂದು ಬೆಳಿಗ್ಗೆ ಒಂಭತ್ತರಿಂದ ಮಧ್ಯಾಹ್ನವರೆಗೆ ಜಾನುವಾರು ಜಾತ್ರೆ ನಡೆಯಲಿದೆ. ಪೂ.10ರಿಂದ ಕೃಷಿ ವಿಚಾರ ಸಂಕಿರಣ ನಡೆಯಲಿದ್ದು ‘ಹಳದಿ ರೋಗ ಪೀಡಿತ ಅಡಕೆ ಕೃಷಿಗೆ ಪರ್ಯಾಯವಾಗಿ ತಾಳೆ ಬೆಳೆ’ ಮತ್ತು ‘ಲಾಭದಾಯಕ ಕಾಳುಮೆಣಸು ಕೃಷಿ’ ಬಗ್ಗೆ ಗೋಷ್ಠಿಗಳು ನಡೆಯಲಿದೆ. ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೆಬ್ ಸೈಟ್ ಲೋಕಾರ್ಪಣೆ ಮಾಡುವರು. ಬಳಿಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂತೋಷ್ ಕುತ್ತಮೊಟ್ಟೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ವಾಸುದೇವ ನಾಯಕ್‌.ವಿ. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago