ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಲೋಕಸಭೆ ಮತ್ತು ನಗರಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ ಜೂ.11ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಸಕ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…