ಕಾರ್ಯಕ್ರಮಗಳು

ಜೂ.14-15 ಪುತ್ತೂರಿನಲ್ಲಿ ಹಲಸು ಹಬ್ಬ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪುತ್ತೂರಿನಲ್ಲಿ ರಾಜ್ಯ ಮಟ್ಟದ ಹಲಸಿನ ಹಬ್ಬ ಜೂ.14 ಹಾಗೂ 15 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಸಂಬಂಧ ಪೂರ್ವಬಾವಿ ಸಭೆ ಹಾಗೂ ಹಲಸು ಹಬ್ಬ ಕ್ರಿಯಾ ಸಮಿತಿ ರಚನೆ ಮಾಡಲಾಯಿತು.

Advertisement
Advertisement

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪೂರ್ವಬಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲಸು ಹಬ್ಬವನ್ನು ವೈಶಿಷ್ಠ್ಯ ಪೂರ್ಣವಾಗಿ ಆಚರಿಸುವಂತೆ ನಿರ್ಧರಿಸಲಾಯಿತು. ಹಲಸಿನ ವಿವಿಧ ಖಾದ್ಯಗಳು , ಹಲಸು ಖಾದ್ಯಗಳ ಪ್ರಾತ್ಯಕ್ಷಿಕೆ, ಹಲಸು ಬಗ್ಗೆ ಗೋಷ್ಠಿಗಳು ಸೇರಿದಂತೆ ಹಲಸು ಬಗ್ಗೆಯೇ ಎರಡು ದಿನ ಚರ್ಚೆ ನಡೆಸಲು ನಿರ್ಧರಿಸಲಾಯಿತು.

ಇದೇ ಸಂದರ್ಭ ಹಲಸು ಕ್ರಿಯಾ ಸಮಿತಿ ರಚನೆ ಮಾಡಲಾಯಿತು. ಹಲಸು ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಸೇಡಿಯಾಪು ಜನಾರ್ಧನ ಭಟ್ ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುಹಾಸ ಮರಿಕೆ, ಉಪಾಧ್ಯಕ್ಷರಾಗಿ ಗಣಪತಿ ಭಟ್ ಎಕ್ಕಡ್ಕ, ಸಂಚಾಲಕರಾಗಿ ಸತೀಶ್ ಕೊಂಗೋಟು,  ಗೌರವ ಸಲಹೆಗಾರರಾಗಿ ವಿ.ಬಿ ಅರ್ತಿಕಜೆ, ಎವಿ ನಾರಾಯಣ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ವಿವಿಧ ಸಮಿತಿ ರಚನೆ ಮಾಡಲಾಯಿತು.

ಸಭೆಯಲ್ಲಿ ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ,  ಪಾಂಡುರಂಗ ಭಟ್, ತಿಮ್ಮಪ್ಪ ಪಾಟಾಳಿ, ಮಹಾದೇವ ಶಾಸ್ತ್ರಿ ಮಣಿಲ, ಮಹೇಶ್ ಪುಚ್ಚಪ್ಪಾಡಿ, ಗೋವಿಂದ ಬೋರ್ಕರ್, ಕವಿತಾ ಅಡೂರು, ಟಿ ರಂಗರಾವ್, ಜಗನ್ನಿವಾಸ ರಾವ್, ಹರಿಕೃಷ್ಣ ಕಾಮತ್,  ಎಪಿ ಸದಾಶಿವ, ಯಮುನಾ , ಶ್ರೀಶಕುಮಾರ್ , ಐಕೆ ಬೊಳುವಾರು, ವೇಣುಗೋಪಾಲ್, ಶಶಿರಾಜ್ ರೈ, ಭಾಸ್ಕರ ಬಾರ್ಯ , ವತ್ಸಲಾ ರಾಜ್ಞಿ ಮೊದಲಾದವರು ಉಪಸ್ಥಿತರಿದ್ದರು.

ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಕಾಶ್ ಕೊಡೆಂಕಿರಿ ವಂದಿಸಿದರು. ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

9 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

13 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

21 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

21 hours ago