Advertisement
ಕಾರ್ಯಕ್ರಮಗಳು

ಜೂ.14-15 ಪುತ್ತೂರಿನಲ್ಲಿ ಹಲಸು ಹಬ್ಬ

Share

ಪುತ್ತೂರು: ಪುತ್ತೂರಿನಲ್ಲಿ ರಾಜ್ಯ ಮಟ್ಟದ ಹಲಸಿನ ಹಬ್ಬ ಜೂ.14 ಹಾಗೂ 15 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಸಂಬಂಧ ಪೂರ್ವಬಾವಿ ಸಭೆ ಹಾಗೂ ಹಲಸು ಹಬ್ಬ ಕ್ರಿಯಾ ಸಮಿತಿ ರಚನೆ ಮಾಡಲಾಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪೂರ್ವಬಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲಸು ಹಬ್ಬವನ್ನು ವೈಶಿಷ್ಠ್ಯ ಪೂರ್ಣವಾಗಿ ಆಚರಿಸುವಂತೆ ನಿರ್ಧರಿಸಲಾಯಿತು. ಹಲಸಿನ ವಿವಿಧ ಖಾದ್ಯಗಳು , ಹಲಸು ಖಾದ್ಯಗಳ ಪ್ರಾತ್ಯಕ್ಷಿಕೆ, ಹಲಸು ಬಗ್ಗೆ ಗೋಷ್ಠಿಗಳು ಸೇರಿದಂತೆ ಹಲಸು ಬಗ್ಗೆಯೇ ಎರಡು ದಿನ ಚರ್ಚೆ ನಡೆಸಲು ನಿರ್ಧರಿಸಲಾಯಿತು.

ಇದೇ ಸಂದರ್ಭ ಹಲಸು ಕ್ರಿಯಾ ಸಮಿತಿ ರಚನೆ ಮಾಡಲಾಯಿತು. ಹಲಸು ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಸೇಡಿಯಾಪು ಜನಾರ್ಧನ ಭಟ್ ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುಹಾಸ ಮರಿಕೆ, ಉಪಾಧ್ಯಕ್ಷರಾಗಿ ಗಣಪತಿ ಭಟ್ ಎಕ್ಕಡ್ಕ, ಸಂಚಾಲಕರಾಗಿ ಸತೀಶ್ ಕೊಂಗೋಟು,  ಗೌರವ ಸಲಹೆಗಾರರಾಗಿ ವಿ.ಬಿ ಅರ್ತಿಕಜೆ, ಎವಿ ನಾರಾಯಣ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ವಿವಿಧ ಸಮಿತಿ ರಚನೆ ಮಾಡಲಾಯಿತು.

ಸಭೆಯಲ್ಲಿ ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ,  ಪಾಂಡುರಂಗ ಭಟ್, ತಿಮ್ಮಪ್ಪ ಪಾಟಾಳಿ, ಮಹಾದೇವ ಶಾಸ್ತ್ರಿ ಮಣಿಲ, ಮಹೇಶ್ ಪುಚ್ಚಪ್ಪಾಡಿ, ಗೋವಿಂದ ಬೋರ್ಕರ್, ಕವಿತಾ ಅಡೂರು, ಟಿ ರಂಗರಾವ್, ಜಗನ್ನಿವಾಸ ರಾವ್, ಹರಿಕೃಷ್ಣ ಕಾಮತ್,  ಎಪಿ ಸದಾಶಿವ, ಯಮುನಾ , ಶ್ರೀಶಕುಮಾರ್ , ಐಕೆ ಬೊಳುವಾರು, ವೇಣುಗೋಪಾಲ್, ಶಶಿರಾಜ್ ರೈ, ಭಾಸ್ಕರ ಬಾರ್ಯ , ವತ್ಸಲಾ ರಾಜ್ಞಿ ಮೊದಲಾದವರು ಉಪಸ್ಥಿತರಿದ್ದರು.

ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಕಾಶ್ ಕೊಡೆಂಕಿರಿ ವಂದಿಸಿದರು. ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago