ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಜೂ.15 ರಂದು ನಡೆಯಲಿದೆ. ದರ್ಬೆ ವೃತ್ತದಿಂದ ಬೊಳುವಾರು ವರೆಗೆ ಮೆರವಣಿಗೆ ನಡೆಯಲಿದ್ದು, ನಂತರ ಸಭಾಕಾರ್ಯಕ್ರಮವು ಪುತ್ತೂರು ಬಂಟರಭವನದಲ್ಲಿ ನಡೆಯಲಿದೆ.
ಪುತ್ತೂರಿನ ಪ್ರತಿನಿಧಿಗಳಾಗಿ ಗೆಲುವುಗಳಿಸಿರುವ ಹಾಗೂ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ,
ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಹಾಗೂ ವಿಜಯೋತ್ಸವ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಅಧ್ಯಕ್ಷ ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾದ ಶಂಭು ಭಟ್, ರಾಮದಾಸ್ ಹಾರಾಡಿ, ಗೌರಿ ಬನ್ನೂರು, ಪಕ್ಷದ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಅಪ್ಪಯ್ಯ ಮಣಿಯಾಣಿ, ವಿಶ್ವೇಶ್ವರ ಭಟ್, ಯುವರಾಜ್ ಪೆರಿಯತ್ತೋಡಿ, ಸುನಿಲ್ ದಡ್ಡು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುರೇಶ್ ಭಟ್, ವಿಶ್ವನಾಥ ಕುಲಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…