ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಜೂ.15 ರಂದು ನಡೆಯಲಿದೆ. ದರ್ಬೆ ವೃತ್ತದಿಂದ ಬೊಳುವಾರು ವರೆಗೆ ಮೆರವಣಿಗೆ ನಡೆಯಲಿದ್ದು, ನಂತರ ಸಭಾಕಾರ್ಯಕ್ರಮವು ಪುತ್ತೂರು ಬಂಟರಭವನದಲ್ಲಿ ನಡೆಯಲಿದೆ.
ಪುತ್ತೂರಿನ ಪ್ರತಿನಿಧಿಗಳಾಗಿ ಗೆಲುವುಗಳಿಸಿರುವ ಹಾಗೂ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ,
ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಹಾಗೂ ವಿಜಯೋತ್ಸವ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಅಧ್ಯಕ್ಷ ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾದ ಶಂಭು ಭಟ್, ರಾಮದಾಸ್ ಹಾರಾಡಿ, ಗೌರಿ ಬನ್ನೂರು, ಪಕ್ಷದ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಅಪ್ಪಯ್ಯ ಮಣಿಯಾಣಿ, ವಿಶ್ವೇಶ್ವರ ಭಟ್, ಯುವರಾಜ್ ಪೆರಿಯತ್ತೋಡಿ, ಸುನಿಲ್ ದಡ್ಡು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುರೇಶ್ ಭಟ್, ವಿಶ್ವನಾಥ ಕುಲಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…