ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ ಜೂ.18 ರಂದು ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೂರು ಮುಖ್ಯ ಕಾರ್ಯಕ್ರಮಗಳು ಆ ದಿನ ನಡೆಯಲಿದ್ದು ಕೇಂದ್ರ ಸರ್ಕಾರದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ನಿರ್ದೇಶನಾಲಯಕ್ಕೆ ಮಂಜೂರಾದ ಯೋಜನೆಯ ಉದ್ಘಾಟನೆ ಹಾಗೂ ರೈತ ಉತ್ಪಾದಕ ಕಂಪನಿಗಳ ಬಗ್ಗೆ ಮಾಹಿತಿ ಮತ್ತು ಅಖಿಲ ಭಾರತ ಗೇರು ಬೆಳೆಗಾರರ ಸಂಘ ಹುಟ್ಟುಹಾಕಲು ಸಮಾಲೋಚನಾ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಡಾ. ಮಂಜುನಾಥ ಕೆ. ನಾಯ್ಕ್,ಗೇರು ಮತ್ತು ಕೋಕೋ ಅಭಿವೃದ್ಧಿನಿರ್ದೇಶನಾಲಯದ ನಿರ್ದೇಶಕ ಡಾ. ವೆಂಕಟೇಶ್, ಎನ್. ಹುಬ್ಬಳ್ಳಿ, ಭಾಗವಹಿಸುವರು. ರೈತ ಉತ್ಪಾದಕ ಕಂಪನಿಗಳ ಬಗ್ಗೆ ಎಸ್. ರಮೇಶ್ ಹಾಗೂ ರಾಮ್ ಕಿಶೋರ್ ಮಂಚಿ, ಡಾ. ಹೆಚ್ .ಆರ್. ನಾಯಕ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…