ಸುಳ್ಯ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಜೂನ್ 21 ಮತ್ತು 22 ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪೆಜತ್ತಾಯ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹನ್ನೊಂದನೆ ಆವೃತ್ತಿಯ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ”ಯನ್ನು ಜೂನ್ 21 ರಂದು ಪೂರ್ವಾಹ್ನ 09.30ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ಸಚ್ಚಿದಾನಂದ ಉದ್ಘಾಟಿಸಲಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಎಡಪಡಿತ್ತಾಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಯೋಗ ಮೇಳದಲ್ಲಿ ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆಟ್ರ್ಸ್, ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್ಎಸ್ಎಲ್ಸಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಸುಮಾರು 200ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ನೋಂದಾವಣೆ ಪ್ರಕ್ರಿಯೆಯು ಎಲ್ಲಾ ಅಭ್ಯರ್ಥಿಗಳಿಗೆ ಮುಕ್ತವಾಗಿದ್ದು ಜೂನ್ 21 ಹಾಗೂ 22 ಎರಡು ದಿನ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಆನ್ಲೈನ್ ನೊಂದಾವಣಿ ಕಡ್ಡಾಯವಾಗಿದ್ದು, ಆ ಮೂಲಕ ಸಂಗ್ರಹವಾದ ಮಾಹಿತಿಯನ್ನು ನೇಮಕಾತಿ ಪ್ರಕ್ರಿಯೆ ಸುಲಲಿತವಾಗಿ ನಡೆಯಲು ಬಳಸಿಕೊಳ್ಳಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9611686148, 9663190590, 8494934852, 9008907716 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ವಿವರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಲ, ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್ಕುಮಾರ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…