Advertisement
ಜಿಲ್ಲೆ

ಜೂ.21 ಮತ್ತು 22 ರಂದು ಆಳ್ವಾಸ್‍ನಲ್ಲಿ ಬೃಹತ್ ಉದ್ಯೋಗ ಮೇಳ

Share

ಸುಳ್ಯ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಜೂನ್ 21 ಮತ್ತು 22 ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪೆಜತ್ತಾಯ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹನ್ನೊಂದನೆ ಆವೃತ್ತಿಯ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ”ಯನ್ನು ಜೂನ್ 21 ರಂದು ಪೂರ್ವಾಹ್ನ 09.30ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ಸಚ್ಚಿದಾನಂದ ಉದ್ಘಾಟಿಸಲಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಎಡಪಡಿತ್ತಾಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಯೋಗ ಮೇಳದಲ್ಲಿ ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್‍ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್‍ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆಟ್ರ್ಸ್, ಕಾಮರ್ಸ್ ಹಾಗೂ ಮ್ಯಾನೇಜ್‍ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಸುಮಾರು 200ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ನೋಂದಾವಣೆ ಪ್ರಕ್ರಿಯೆಯು ಎಲ್ಲಾ ಅಭ್ಯರ್ಥಿಗಳಿಗೆ ಮುಕ್ತವಾಗಿದ್ದು ಜೂನ್ 21 ಹಾಗೂ 22 ಎರಡು ದಿನ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಆನ್‍ಲೈನ್ ನೊಂದಾವಣಿ ಕಡ್ಡಾಯವಾಗಿದ್ದು, ಆ ಮೂಲಕ ಸಂಗ್ರಹವಾದ ಮಾಹಿತಿಯನ್ನು ನೇಮಕಾತಿ ಪ್ರಕ್ರಿಯೆ ಸುಲಲಿತವಾಗಿ ನಡೆಯಲು ಬಳಸಿಕೊಳ್ಳಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9611686148, 9663190590, 8494934852, 9008907716 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ವಿವರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಲ, ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್‍ಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago