ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

June 26, 2019
9:28 PM

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror