Advertisement
ರಾಜ್ಯ

ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

Share

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

4 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

6 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

10 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

13 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

14 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago