Advertisement
ರಾಜ್ಯ

ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

Share

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

8 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

9 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

12 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

12 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

19 hours ago