Advertisement
ರಾಜ್ಯ

ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

Share

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

2 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

6 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

6 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

15 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

16 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

22 hours ago