Advertisement
ರಾಜ್ಯ

ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

Share

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

Advertisement

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

13 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

19 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

1 day ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

1 day ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

3 days ago