ಜೂ.30 ರವರೆಗೆ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

May 16, 2019
11:30 AM

ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ  ಜೂ. 30 ರವರೆಗೆ ನಡೆಯಲಿದೆ.

ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.  ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ      ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ  ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ  ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.

ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ  ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.

ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.

ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.

ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.

ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.

ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.

ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror